ಗೋಕರ್ಣ ಕಡಲತೀರದಲ್ಲಿ ಇಬ್ಬರು ಪ್ರವಾಸಿಗರು ನೀರುಪಾಲು
ಕಾರವಾರ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರವಾಸಿಗರು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣ ಕಡಲತೀರದಲ್ಲಿ ನಡೆದಿದೆ. ಇದೇ ವೇಳೆ ಗಂಭೀರಗೊಂಡ ಮತ್ತೊಬ್ಬ ಪ್ರವಾಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
09:52 PM Dec 03, 2023 IST
|
Umesha HS
ಕಾರವಾರ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರವಾಸಿಗರು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣ ಕಡಲತೀರದಲ್ಲಿ ನಡೆದಿದೆ. ಇದೇ ವೇಳೆ ಗಂಭೀರಗೊಂಡ ಮತ್ತೊಬ್ಬ ಪ್ರವಾಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
ಕಲಬುರಗಿ ಮೂಲದ ಅಭಿಷೇಕ್, ಆಕಾಶ್ ಮೃತ ಪ್ರವಾಸಿಗರು. ಕಲಬುರಗಿಯಿಂದ ಐವರು ಸ್ನೇಹಿತರು ಪ್ರವಾಸಕ್ಕೆಂದು ಗೋಕರ್ಣಕ್ಕೆ ಆಗಮಿಸಿದ್ದರು. ಸಮುದ್ರದಲ್ಲಿ ಮೂವರು ಈಜಲು ತೆರಳಿದ್ದಾಗ ಅಲೆಗಳಿಗೆ ಸಿಲುಕಿ ಮುಳುಗಿದ್ದರು. ಈ ವೇಳೆ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದು, ಒಬ್ಬನನ್ನು ರಕ್ಷಣೆ ಮಾಡಲಾಗಿದೆ. ಗಂಭೀರಗೊಂಡ ಪ್ರವಾಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
Advertisement
Next Article